ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಶಂಕೆ; ಪತಿ ಯುವಕನಿಗೆ ಮಾಡಿದ್ದೇನು ಗೊತ್ತಾ?

ಗುರುವಾರ, 25 ಜೂನ್ 2020 (11:07 IST)
ಬೆಳಗಾವಿ : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಯುವಕನೊಬ್ಬನ್ನು ಪತಿ ಬರ್ಬರವಾಗಿ ಕೊಂದ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಗ್ರಾಮದಲ್ಲಿ ನಡೆದಿದೆ.

ದ್ಯಾಮಪ್ಪ ವಣ್ಣೂರ (22) ಕೊಲೆಯಾದ ಯುವಕ. ಈರಪ್ಪ ನಾಯ್ಕರ್  ಕೊಲೆ ಮಾಡಿದ ಆರೋಪಿ. ದ್ಯಾಮಪ್ಪ ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡ ಈರಪ್ಪ ತನ್ನ ಕುಟುಂಬದವರ ಜೊತೆ ಸೇರಿ ಬುಧವಾರ ಸಂಜೆ ದ್ಯಾಮಪ್ಪನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ