ರಮಾನಾಥ್ ರೈಗೆ ಗೃಹ ಸಚಿವ ಸ್ಥಾನ ಯಾರೂ ಹೇಳಿದ್ದು? : ಸಿಎಂ

ಬುಧವಾರ, 26 ಜುಲೈ 2017 (15:46 IST)
ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವ ಸ್ಥಾನ ನೀಡಲಾಗುವುದು ಎನ್ನುವ ವರದಿಗಳನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಸ್ಥಾನ ನೀಡಲಾಗುವುದು ಎಂದು ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಇನ್ನೂ ಸಚಿವ ಸಂಪುಟ ವಿಸ್ತರಣೆಯೇ ಆಗಿಲ್ಲ,ಗೃಹ ಸಚಿವ ಸ್ಥಾನದ ಬಗ್ಗೆ ಕೇಳಿದರೆ ಏನು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.
 
ಮೊದಲು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿ. ನಾವಂತೂ ಗೃಹ ಸಚಿವ ಖಾತೆಗೆ ರಮಾನಾಥ್ ರೈ ಹೆಸರು ಹೇಳಿಲ್ಲ. ಗೃಹ ಸಚಿವನಾಗ್ತೀನಿ ಅಂತ ರೈ ನಿಮಗೆ ಹೇಳಿದ್ದಾರಾ? ಕೇವಲ ಉಹಾಪೋಹ ವರದಿಗಳತ್ತ ಗಮನ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
 
ಕರಾವಳಿ ಜಿಲ್ಲೆಗಳಲ್ಲಿ ಸಚಿವ ರಮಾನಾಥ್ ರೈಗೆ ಕಾಂಗ್ರೆಸ್ ನಾಯಕತ್ವ ನೀಡಲು ನಿರ್ಧರಿಸಲಾಗಿದ್ದು, ಅವರಿಗೆ ಪ್ರಮೋಷನ್ ನೀಡಿ ಗೃಹ ಸಚಿವರನ್ನಾಗಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನುವ ವರದಿಗಳು ಹರಡಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ