ರಾಯಣ್ಣ ಬ್ರಿಗೇಡ್ನಿಂದ ಹಿಂದುಳಿದ ವರ್ಗದವರು ಹಾಗೂ ದಲಿತರು ಜಾಗೃತಿಯಾಗುತ್ತಿದ್ದು, ಇದರಿಂದ ಕಾಂಗ್ರೆಸ್ನವರಿಗೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಸಹಿಸಲಾಗುತ್ತಿಲ್ಲ. ಬ್ರಿಗೇಡ್ಗೆ ವಿರೋಧ ಏಕೆ ಎಂದು ಬಿಎಸ್ವೈ ಸ್ಪಷ್ಟಪಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಗೇಡ್ಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇವಲ 28 ಜನರು ತಮ್ಮ ವಿರುದ್ಧ ಸಹಿಸಂಗ್ರಹ ಮಾಡಿದ್ದು, ಶಿಸ್ತಿನ ಪಕ್ಷವಾಗಿರುವ ಬಿಜೆಪಿಯಲ್ಲಿ ಇಂತಹ ವ್ಯವಸ್ಥೆಯೇ ಇಲ್ಲ. ಸಹಿ ಸಂಗ್ರಹಕ್ಕೆ ಬೆಲೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಮುರಳೀಧರರಾವ್ ಸ್ಪಷ್ಟಪಡಿಸಿದ್ದಾರೆ ಎಂದರು.