ಗೂಗಲ್ ಪ್ಲೇ ಸ್ಟೋರ್ ನಿಂದ ಸಿಎಂ ಸಿದ್ದರಾಮಯ್ಯ ಆಪ್ ಡಿಲೀಟ್ ಮಾಡಿದ್ದೇಕೆ? ಕಾರಣ ಇಲ್ಲಿದೆ ನೋಡಿ
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ ಡಿಲೀಟ್ ಮಾಡಿದ್ದಕ್ಕೆ ಬಿಜೆಪಿ ಟೀಕೆ ಮಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಇದೆಲ್ಲಾ ಚುನಾವಣಾ ನೀತಿ ಸಂಹಿತೆಗಾಗಿ ಎಂದಿದ್ದಾರೆ.
‘ಆ ಆಪ್ ನಲ್ಲಿ ನನ್ನ ಹಲವಾರು ಫೋಟೋಗಳಿತ್ತು. ಆ ಫೋಟೋಗಳನ್ನೆಲ್ಲಾ ಡಿಲೀಟ್ ಮಾಡುವುದು ಸುಲಭವಲ್ಲ. ಅದೇ ಕಾರಣಕ್ಕೆ ಇ-ಗವರ್ನಮೆಂಟ್ ಡಿಪಾರ್ಟ್ ಮೆಂಟ್ ಗೆ ಅದನ್ನು ಡಿಲೀಟ್ ಮಾಡಲು ಹೇಳಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆಂದು ಹೀಗೆ ಮಾಡಿದೆ. ಚುನಾವಣೆ ಮುಗಿದ ಬಳಿಕ ಮತ್ತೆ ಚಾಲ್ತಿಗೆ ಬರುತ್ತದೆ’ ಎಂದು ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.