ಡಿಸಿಎಂ ದೆಹಲಿಗೆ ಹೋಗಿದ್ದು ಏಕೆ? ಕೈ ಪಾಳೆಯದಲ್ಲಿ ಕುತೂಹಲ!

ಗುರುವಾರ, 23 ಆಗಸ್ಟ್ 2018 (21:12 IST)
ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ಪಯಣ ಬೆಳೆಸಿದ್ದಾರೆ. ಇದು ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಹರಡುತ್ತಿರುವಂತೆಯೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ವಿಸ್ತರಣೆ ವೇಳೆಯಲ್ಲಿ ಯಾರನ್ನು ಪರಿಗಣಿಸಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಷಯ. ಅದರಂತೆ ಕಾಂಗ್ರೆಸ್- ಜೆಡಿಎಸ್ ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ ಅಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಕ ಮಾಡುವುದನ್ನು ಆಯಾ ಪಕ್ಷಗಳ ಹಿರಿಯರು ನೋಡಿಕೊಳ್ಳುತ್ತಾರೆ. ಸಮನ್ವಯ ಸಮಿತಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ