ಸಿಎಂ ಕುಮಾರಸ್ವಾಮಿಯನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ಯಾಕೆ?

ಸೋಮವಾರ, 19 ನವೆಂಬರ್ 2018 (06:36 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ.


ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.


ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅಲ್ಲಿನ ಜನರ ಪರವಾಗಿ ಲೀಲಾವತಿ ಅವರು ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ