ನಿಖಿಲ್ ಕುಮಾರಸ್ವಾಮಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ಯಾಕೆ?

ಮಂಗಳವಾರ, 13 ಆಗಸ್ಟ್ 2019 (13:54 IST)
ಮಾಜಿ ಮುಖ್ಯಮಂತ್ರಿಯ ಪುತ್ರರಾಗಿರೋ ನಿಖಿಲ್ ಮಾಡಿರೋ ಈ ಕೆಲಸಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗತೊಡಗಿದೆ.

ಭಾರೀ ಪ್ರಮಾಣದ ಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಏತನ್ಮಧ್ಯೆ ಕನ್ನಡ ಚಿತ್ರರಂಗದ ನಟರು ನೆರೆ ಪೀಡಿತರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ.

‘ಕುರುಕ್ಷೇತ್ರ’ ಚಲನಚಿತ್ರದಲ್ಲಿ ಅಭಿನಯಿಸಿರೋ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿರೋ ಸಂಭಾವನೆಯನ್ನು ಪ್ರವಾಹ ಸಂತ್ರಸ್ಥರಿಗೆ ಕೊಟ್ಟಿದ್ದಾರೆ.

ಕುರುಕ್ಷೇತ್ರ ಚಲನಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯು ಪಾತ್ರ ನಿರ್ವಹಿಸಿದ್ದಾರೆ. ಈ ನಡುವೆ ನಿಖಿಲ್ ಪ್ರವಾಹ ಪೀಡಿತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನ ಕೇಳುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ