ಸುರೇಶ ಅಂಗಡಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎನ್ನಲು ಕಾರಣವೇನು?

ಬುಧವಾರ, 10 ಜನವರಿ 2018 (12:55 IST)
ಬೆಳಗಾವಿಯ ಸಂಸದ ಸುರೇಶ ಅಂಗಡಿ ಅವರ ಮಾತಿನಿಂದ ಬೇಸರಗೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಕಷ್ಟವಾದರೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎಂದು ಎಚ್ಚರಿಸಿದ್ದಾರೆ.
 
ಕರ್ನಾಟಕ ವಿಧಾನಸಭೆ ಚುನಾವಣೆಯ ಸಂಬಂಧ ಸರಣಿ ಸಭೆಗಳನ್ನು ನಡೆಸುತ್ತಿರುವ ಅಮಿತ್ ಶಾ ಅವರಲ್ಲಿ ಬೇರೆ ಕ್ಷೇತ್ರಗಳ ಉಸ್ತುವಾರಿ ವಹಿಸಿದರೆ ಕಷ್ಟವಾಗುತ್ತದೆ, ಆದ್ದರಿಂದ ಸಂಸದರಿಗೆ ಸ್ಥಳೀಯ ಕ್ಷೇತ್ರಗಳ ಉಸ್ತುವಾರಿ ವಹಿಸಬೇಕು ಎಂದು ಸಂಸದ ಸುರೇಶ ಅಂಗಡಿ ಅವರು ಹೇಳಿದ್ದಾರೆ.
 
ಅಮಿತ್ ಶಾ ಕೋಪದಿಂದ ನಿಮಗೆ ಕಷ್ಟವಾದರೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎಂದು ಹೇಳಿದ ಅವರು, ನಿಮ್ಮ ಪರವಾಗಿ ಎಷ್ಟು ಜನ ಕೆಲಸ ಮಾಡಲು ಸಿದ್ಧರಿದ್ದಾರೆ ಎಂಬುದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ