ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ
ಇದರ ಬೆನ್ನಲ್ಲೇ ಇಂದು ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಬಿಜೆಪಿ ಘಟಕ ಘೋಷಿಸಿತ್ತು. ಆದರೆ ಈಗ ಕೊನೆಯ ಕ್ಷಣದಲ್ಲಿ ಪ್ರತಿಭಟನೆಯನ್ನು ಇಂದು ನಡೆಸುವುದಿಲ್ಲ. ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿದೆ.
ಇದಕ್ಕೆ ಕಾರಣ ಗುಜರಾತ್ ನಲ್ಲಿ ಸಂಭವಿಸಿದ ವಿಮಾನ ದುರಂತ. ಗುಜರಾತ್ ನಲ್ಲಿ ವಿಮಾನ ದುರಂತ ಸಂಭವಿಸಿ ದೇಶದಾದ್ಯಂತ ದುಃಖ ಮಡುಗಟ್ಟಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಬೇಡ ಎಂಬ ಕಾರಣಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಪ್ರಕಟಣೆ ನೀಡಿದೆ.