ಮಹಿಳಾ ಹಾಸ್ಟೆಲ್ ಹಿಂದೆ ಯುವಕನ ಕೊಲೆಯಾಗಿದ್ದೇಕೆ?

ಮಂಗಳವಾರ, 30 ಜುಲೈ 2019 (12:38 IST)
ಮಹಿಳಾ ಹಾಸ್ಟೆಲ್ ಹಿಂಭಾಗದ ಪ್ರದೇಶದಲ್ಲಿ ಯುವಕನೊಬ್ಬನ ಕೊಲೆಯಾಗಿರೋದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಧಾರವಾಡದಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರೋ ಕಾರ್ಯನಿರತ ಮಹಿಳಾ ಹಾಸ್ಟೆಲ್ ಹಿಂಭಾಗದ ಪ್ರದೇಶದಲ್ಲಿ ಯುವಕ ನಾಗರಾಜ್ ಎಂಬಾತನ ಕೊಲೆ ಆಗಿದೆ.

ಕೆಲಗೇರಿ ನಿವಾಸಿಯಾಗಿರೋ ನಾಗರಾಜ್ (22) ನನ್ನ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರಬಹುದು ಅಂತ ಪೊಲೀಸರು ಶಂಕಿಸಿದ್ದಾರೆ. ಉಪನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ