ಹೌದು, ನಗರದ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಸಭೆಯಲ್ಲಿ ಬರ ಪರಿಹಾರ ಹಾಗೂ ರೈತರ ಆತ್ಮಹತ್ಯೆ ಸಂಬಂಧ ಇಲಾಖಾ ಹಾಗೂ ಜಿಲ್ಲಾವಾರು ಸಮಸ್ಯೆಗಳನ್ನು ಪರಿಗಣಿಸಿ ಅಧಿಕಾರಿಗಳೊಂದಿಗೆ ಸೂಕ್ತವಾಗಿ ಚರ್ಚಿಸಲಾಗುತ್ತಿತ್ತು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಉಮೇಶ್ ಅವರು ಪದೇ ಪದೇ ಹೊರಗೆ ಎದ್ದು ಹೋಗುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ, ರೈತರ ಆತ್ಮಹತ್ಯೆಯಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿರುವಾಗ ಹಾಗೆ ಪದೇ ಪದೇ ಎದ್ದು ಹೋದರೆ ಹೇಗೆ ನಾನ್ ಸೆನ್ಸ್, ಗಂಭೀರವಾಗಿರಿ. ಇದು ಮಕ್ಕಳ ಆಟವಲ್ಲ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.