ಇಂದು ಮೈತ್ರಿ ಶಾಸಕರು ರಾಜೀನಾಮೆ ನೀಡ್ತಾರಾ? ಗುಪ್ತಚರ ಇಲಾಖೆಯಿಂದ ಬಂದ ಸ್ಪೋಟಕ ಮಾಹಿತಿ ಏನು?

ಮಂಗಳವಾರ, 9 ಜುಲೈ 2019 (10:29 IST)
ಬೆಂಗಳೂರು : ಶಾಸಕರ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿಗೆ ಗುಪ್ತಚರ ಇಲಾಖೆಯಿಂದ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ.



ಈಗಾಗಲೇ ಮೈತ್ರಿ ಸರ್ಕಾರದ 15 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೆ ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರಿನಲ್ಲಿ ಇರಲಿಲ್ಲ. ಆದರೆ ಇಂದು ಸ್ಪೀಕರ್ ಹಾಜರಾಗಿರುವ ಹಿನ್ನಲೆಯಲ್ಲಿ ಇನ್ನು ಕೆಲವು ಮಂದಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು.

 

ಆದರೆ ಇದೀಗ ಸಿಎಂ ಕುಮಾರಸ್ವಾಮಿಗೆ  ಇಲಾಖೆಯಿಂದ  ಮಾಹಿತಿ ಲಭ್ಯವಾಗಿದ್ದು, ಇಂದು ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ.ಇದರಿಂದ ಮೈತ್ರಿ ಸರ್ಕಾರದ ನಾಯಕರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.  
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ