ವಿಧಾನ ಪರಿಷತ್ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಹಿಂದಿನ ಸರ್ಕಾರಗಳು ಸಾರಾಯಿ ನಿಷೇಧಿಸಿರುವುದಾಗಿ ಹೇಳಿಕೊಂಡಿದ್ದವು. ಆದರೆ ಅಂದಿನ ಆ ದಿನಗಳಲ್ಲಿ ಅದರ ವಸ್ತುಸ್ಥಿತಿಯೇ ಬೇರೆಯಾಗಿತ್ತು. ಆದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ನಿಷೇಧಕ್ಕೆ ಮುಂದಾಗಿದ್ದು, ನಿಷೇಧ ಹಿಂಪಡೆಯುವ ಮಾತೇ ಇಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಾಯಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸುತ್ತೇವೆ ಎಂದರು.
ಇದೇ ವೇಳೆ ಮಾತನಾಡಿದ ಅವರು, ಈ ಸಂಬಂಧ ಕೆಲ ಮಾಧ್ಯಮಗಳು ಈಗಾಗಲೇ ಪ್ರಕಟಿಸಿರುವುದನ್ನು ನಾನು ಗಮನಿಸಿದ್ದೇನೆ. ಅವುಗಳಲ್ಲಿ ಸಾರಾಯಿ ಭಾಗ್ಯ ಎಂದು ಉಲ್ಲೇಖ ಮಾಡಲಾಗಿದೆ. ಆದರೆ, ನಾನು ಸಾರಾಯಿ ನಿಷೇಧವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದೆ. ನನ್ನ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಹಾಗೆ ಬರೆಯಲಾಗಿದೆ ಎಂದರು.