ಶಾಸಕರನ್ನು ದುಬೈಗೆ ಕರೆದೊಯ್ಯುತ್ತಾರಾ ಸತೀಶ್ ಜಾರಕಿಹೊಳಿ..?

ಗುರುವಾರ, 26 ಅಕ್ಟೋಬರ್ 2023 (17:41 IST)
ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಚಿವ ಸತೀಶ್ ಜಾರಕಿಹೊಳಿ ಆಂತರಿಕ ಸಮರ ತಣ್ಣಗಾಗದಂತೆ ಕಾಣುತ್ತಿದೆ. ಮೈಸೂರು ಪ್ರವಾಸ ಕೊಕ್ಕೆ ಹಾಕಿದ ಡಿಕೆಶಿಗೆ ತಿರುಗೇಟು ಕೊಡಲು ಸಾಹುಕಾರ್ ತಂಡ ಸಜ್ಜಾಗಿದೆ. ಮೈಸೂರು ಪ್ರವಾಸ ವಂಚಿತ ಶಾಸಕರನ್ನು ಸತೀಶ್‌ ಜಾರಕಿಹೊಳಿ ದುಬೈಗೆ ಕರೆದೊಯ್ಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ. ದುಬೈ ಪ್ರವಾಸದ ಬಗ್ಗೆ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಸುಳಿವು ಕೊಟ್ಟಿದ್ದಾರೆ.ಇನ್ನು ಆಸೀಫ್ ಸೇಠ್ ಹೇಳಿಕೆಯನ್ನು ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ