ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ: ನಾಮಪತ್ರ ಸಲ್ಲಿಸಿ ವಿಶ್ವಾಸ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Sampriya

ಬುಧವಾರ, 17 ಏಪ್ರಿಲ್ 2024 (19:16 IST)
Photo Courtesy X
ಬೆಳಗಾವಿ: ಭಾರತೀಯ ಜನತಾ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಕರ್ನಾಟಕದ ಬೆಳಗಾವಿ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಅಂತರದಲ್ಲಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ದೃಢಪಡಿಸಿದರು.

ಬಿಜೆಪಿ ಗೆಲ್ಲಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.

ಕಳೆದ ತಿಂಗಳು ನಾನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪ್ರವೇಶಿಸಿದಾಗ 10 ಸಾವಿರಕ್ಕೂ ಹೆಚ್ಚು ಜನರು ಜಮಾಯಿಸಿ ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದರು, ಆ ದಿನದಿಂದ ನಾನು ಕ್ಷೇತ್ರಗಳಿಗೆ ಭೇಟಿ ನೀಡಿ ಮತ ಕೇಳುತ್ತಿದ್ದೇನೆ. ಬೆಳಗಾವಿ ಜಿಲ್ಲೆಯ ಎಲ್ಲಾ ನಾಯಕರು, ಎಲ್ಲಾ ಬಿಜೆಪಿ ನಾಯಕರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು, ಎಲ್ಲರೂ ಬೆಂಬಲಿಸುತ್ತಿದ್ದಾರೆ ಮತ್ತು ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.

"ಇಂದು ನಾಮಪತ್ರ ಸಲ್ಲಿಕೆ ಒಂದು ದೊಡ್ಡ ಕಾರ್ಯಕ್ರಮವಾಗಿದೆ. ಬೆಳಗಾವಿ ಕ್ಷೇತ್ರದ ಇತಿಹಾಸದಲ್ಲಿ ಇದು ಅತ್ಯಂತ ದೊಡ್ಡ ಸಮಾವೇಶವಾಗಿದೆ. ಸಾವಿರಾರು ಜನರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಹಾಗಾಗಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೆಟ್ಟರ್ ನಾಮಪತ್ರ ಸಲ್ಲಿಕೆ ವೇಳೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ