ನಗರದಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆ: ವಾಹನ ಸವಾರರು ಮನೆ ಸೇರಲು ದೌಡು

ಮಂಗಳವಾರ, 5 ಅಕ್ಟೋಬರ್ 2021 (20:27 IST)
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ 5 ರ ನಂತರ  ಮಳೆ ಪ್ರಾರಂಭವಾಯಿತು. ಕೆಲವು ರಸ್ತೆ ಹಾಗೂ ತಗ್ಗುಪ್ರದೇಶಗಳಿಗೆ ನೀರು ನಿಂತು ವಾಹನ ಸವಾರರು ಕೊಂಚ ಪರದಾಡುವಂತಾಯಿತು. ಕೆಲಸದ ಮುಗಿಯುವ ಸಮಯದಲ್ಲಿ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ದ್ವಿಚಕ್ರ ವಾಹನ ಸವಾರರು ಮನೆ ಕಡೆ ದೌಡಾಸಿದರು.
 
ಹಲವೆಡೆ ಮಳೆ: 
 
ನಗರದ ಆರ್.ಆರ್. ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಾಪೀಠ, ಕೆಂಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ, ಮನೋರಾಯಯನಪಾಳ್ಯ, ಹೊರಮಾವು, ಬಸವನಪುರ, ದೊಡ್ಡನೆಕುಂದಿ, ಕೊಟ್ಟಿಗೆಪಾಳ್ಯ, ಬಾಣಸವಾಡಿ, ಚೊಕ್ಕಸಂದ್ರ, ಪೀಣ್ಯ, ವಿದ್ಯಾಾರಣ್ಯಪುರ, ಅತ್ತೂರು, ಕೆಂಪೇಗೌಡ ವಾರ್ಡ್, ಬಾಗಲಗುಂಟೆ, ದೊಡ್ಡಬೊಮ್ಮಸಂದ್ರ, ಬ್ಯಾಾಟರಾಯನಪುರ, ಹೆಗ್ಗನಹಳ್ಳಿ, ಕಲ್ಯಾಣನಗರ, ಬೆಳ್ಳಂದೂರು, ಸಿಂಗಸಂದ್ರ ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗಿದೆ.
 
ಪ್ರಮುಖ ರಸ್ತೆಗಳಲ್ಲಿ ನೀರು:
 
ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೆಸ್ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ.ಆರ್.ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತುಕೊಂಡಿದ್ದು ಕಂಡು ಬಂದಿತು. ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯ ಕೂಡ ಕಂಡುಬಂದು ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ