ವಿಂಗ್ ಕಮಾಂಡರ್ ಸುರಕ್ಷತೆಗಾಗಿ ಟೆಂಗಿನಕಾಯಿ ಒಡೆದು ಪ್ರಾರ್ಥನೆ

ಗುರುವಾರ, 28 ಫೆಬ್ರವರಿ 2019 (20:21 IST)
ಪಾಕ್‌ ಸೇನೆಯ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಲೆಂದು ಪ್ರಾರ್ಥನೆ ಸಲ್ಲಿಸಲಾಗಿದೆ.

ಕಲಬುರಗಿಯ ಸುಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ. 21 ತೆಂಗಿನಕಾಯಿ ಒಡೆದು ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಸೇರಿದಂತೆ ಇತರರು ಉಪಸ್ಥಿತಿ ಇದ್ದರು.

ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್‌ನ ಪೈಲಟ್ ಅಭಿನಂದನ್ ಪಾಕಿಸ್ತಾನದ ವಶದಲ್ಲಿದ್ದಾರೆ. ಫೈಟರ್‌ ಜೆಟ್‌ಗಳ ಮೇಲೆ ಪ್ರತಿದಾಳಿ ನಡೆಸುವಾಗ ಜೆಟ್ ಪತನವಾಗಿತ್ತು. ಈ ವೇಳೆ ಪೈಲಟ್‌, ವಿಂಗ್ ಕಮಾಂಡರ್ ಅಭಿನಂದನ್‌ ವರ್ಧಮಾನ್ ಅವರನ್ನು ವಶಕ್ಕೆ ಪಾಕ್ ಸೇನೆ ಪಡೆದುಕೊಂಡಿದೆ. ಅಭಿನಂದನ್ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಬರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ