ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಮಹಿಳೆ ಸಜೀವ ದಹನ

ಗುರುವಾರ, 5 ಡಿಸೆಂಬರ್ 2019 (10:49 IST)
ಬೀದರ್ : ಚಲುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ಕಾರ್ ನಲ್ಲಿದ್ದ ಮಹಿಳೆಯೊಬ್ಬರು ಸಜೀವ ದಹನವಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನೀರ್ಣಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ.



ಕಲ್ಯಾಣಿ(42) ಸಜೀವ ದಹನವಾದ ಮಹಿಳೆ. ಇಂದು ಬೆಳಿಗ್ಗೆ ಕುಟುಂಬದ ನಾಲ್ವರು ಕಾರಿನಲ್ಲಿ ಹೈದರಾಬಾದ್ ಗೆ ತೆರಳುತ್ತಿದ್ದ ವೇಳೆ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ಕಲ್ಯಾಣಿ ಸೀಟ್ ಬೆಲ್ಟ್ ತೆಗೆಯಲಾಗದೆ ಸಜೀವವಾಗಿ ದಹನವಾಗಿದ್ದು, ಪತಿ ಉದಯಕುಮಾರ್ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.


ಮಾಹಿತಿ ತಿಳಿದು ಮನ್ನಾಏಖೇಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ