ಕಾಡಾನೆ ದಾಳಿಗೆ ಮಹಿಳೆ ಬಲಿ: ಗ್ರಾಮಸ್ಥರಿಂದ ರಸ್ತೆ ತಡೆ

ಭಾನುವಾರ, 20 ಜನವರಿ 2019 (21:58 IST)
ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಆನೆ ದಾಳಿಗೆ ಮೃತ ಪಟ್ಟವರು ಚಾಮರಾಜನಗರ ಜಿಲ್ಲೆಯ ಮಹಂತಾಳಪುರ ಗ್ರಾಮದ ಮಹಿಳೆಯಾಗಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಮಹಾಂತಾಳಪುರ ಗೇಟ್ ಬಳಿ, ರಸ್ತೆಗೆ ಮರದ ದಿಮ್ಮಿಗಳನ್ನ ಇಟ್ಟು ಪ್ರತಿಭಟನೆಯನ್ನು ಜನರು ನಡೆಸಿದರು.
ನಿನ್ನೆ ಬೆಳಗ್ಗೆಯಿಂದ ಆನೆಗಳ ದಾಳಿಯನ್ನು  ತಡೆಯಲಾಗದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ.
ಮೃತರ ಕುಟುಂಬಕ್ಕೆ ಸ್ಥಳದಲ್ಲೇ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಪೊಲೀಸ್  ವಾಹನವನ್ನೇ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು.  

ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ಗ್ರಾಮಸ್ಥರು ತೆಗೆದುಕೊಂಡರು.  



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ