ಹಣಕ್ಕಾಗಿ ಪೀಡಿಸಿದ ಗಂಡ: ಮಗಳೊಂದಿಗೆ ಕೆರೆಗೆ ಆಹಾರವಾದ ಮಹಿಳೆ
2018 ರಲ್ಲಿ ಇಬ್ಬರ ಮದುವೆಯಾಗಿತ್ತು. ಆದರೆ ಮದುವೆಯಾದಾಗಿನಿಂದ ಗಂಡ, ಅತ್ತೆ, ಮಾವ ಮತ್ತು ಗಂಡನ ಸಹೋದರಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಈ ಬಗ್ಗೆ ಮೂರು ಬಾರಿ ರಾಜೀ ಪಂಚಾಯ್ತಿಯೂ ನಡೆದಿದೆ ಎನ್ನಲಾಗಿದೆ.
ಇದೀಗ ಗಂಡನ ಮನೆಯವರ ಹಣದ ದಾಹಕ್ಕೆ ಬೇಸತ್ತ ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮಹಿಳೆ ಸಾವಿಗೆ ಮುನ್ನ ತನ್ನ ಸಾವಿಗೆ ಕಾರಣವಾದವರ ಬಗ್ಗೆ ಡೆತ್ ನೋಟ್ ಬರೆದಿದ್ದಾಳೆ ಎಂದು ಕುಟುಂಬಸ್ಥರು ಹೇಳಿದ್ದಾರೆ.