ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ನನಗೆ ಕಿರುಕುಳ ನೀಡುತ್ತಿದ್ದರು. ನನ್ನ ಅಧೀನ ಅಧಿಕಾರಿಗಳು ಕೆಲಸದಲ್ಲಿ ಸಹಕಾರ ನೀಡುತ್ತಿರಲಿಲ್ಲ. ನಾನು ರಾಜೀನಾಮೆ ನೀಡಲು ಚೇತನ್ ಅವರೇ ಕಾರಣರಾಗಿರುತ್ತಾರೆ’ ಎಂದು ತಮ್ಮ ಆಪ್ತರೊಬ್ಬರ ಮೂಲಕ ರಾಜ್ಯ ಮಹಿಳಾ ಆಯೋಗಕ್ಕೆ ಅನುಪಮಾ ಮಂಗಳವಾರ ದೂರು ಸಲ್ಲಿಸಿದ್ದರು. ದೂರು ಅರ್ಜಿ ವಿಚಾರಣೆಯನ್ನು ಪೊಲೀಸರಿಗೆ ನೀಡಬಾರದು. ಆಯೋಗವೇ ತನಿಖೆ ನಡೆಸಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು.