ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುರ್ಲಿ ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆ 25 ವರ್ಷದ ಶೀವಲೀಲಾ ವಾಳಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಹೆಣ್ಣು ಮಗುವನ್ನು ಹೆತ್ತಿದ್ದಾಳೆ ಎಂಬ ಕಾರಣಕ್ಕೆ ತಮ್ಮ ಮಗಳನ್ನು ಆಕೆಯ ಪತಿಯ ಮನೆಯವರು ಉಸಿರುಗಟ್ಟಿಸಿ ಸಾಯಿಸಿದ್ದಾರೆ ಎಂದು ಶೀವಲೀಲಾ ಪೋಷಕರು ನಿನ್ನೆ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ದೂರಿನ ಆಧಾರದ ಮೇಲೆ ಪೊಲೀಸರು ಮೃತಳ ಪತಿ, ಬಿಎಸ್ಎಫ್ ಯೋಧ ಪತಿ ಸ್ವಪ್ನಿಲ್, ಮಾವ ಸುಭಾಶ್, ಅತ್ತೆ ಶುಭಾ ಮತ್ತು ವಾರಗಿತ್ತಿ ಅರ್ಚನಾಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ.