ನಟರ ಫೋಟೋ ಬಳಸಿಕೊಂಡು ಫೇಸ್ ಬುಕ್ ನಲ್ಲಿ ಚುನಾವಣಾ ಪ್ರಚಾರ ಮಾಡಿದ ಕುಷ್ಟಗಿ ಕಾರ್ಯಕರ್ತರು

ಬುಧವಾರ, 4 ಏಪ್ರಿಲ್ 2018 (12:35 IST)
ಕೊಪ್ಪಳ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಇದೀಗ ಚುನಾವಣಾ ಅಧಿಕಾರಿಗಳ ಕಣ್ಣು ತಪ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕರ್ತರು ಸ್ಯಾಂಡಲ್ ವುಡ್ ನಟರ ಫೋಟೋ ಬಳಕೆ ಮಾಡಿಕೊಂಡು ಚುನಾವಣಾ ಪ್ರಚಾರಕ್ಕೆ ಇಳಿದ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.



ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಜಾರಿ ಮಾಡಿದ್ದಲ್ಲದೇ ಅಭ್ಯರ್ಥಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇದರಿಂದ ಎಲ್ಲಾ ಕಾರ್ಯಕರ್ತರ ಕೈ ಕಟ್ಟಿ ಹಾಕಿದ್ದಂತೆ ಆಗಿತ್ತು. ಈ ಕಾರಣದಿಂದ ಕುಷ್ಟಗಿ ತಾಲೂಕಿನಲ್ಲಿ ಕಾರ್ಯಕರ್ತರು ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಗಣೇಶ್ ಮತ್ತು ಸುದೀಪ್ ಅವರ ಫೋಟೋಗಳನ್ನು ಬಳಸಿಕೊಂಡು ಫೇಸ್ ಬುಕ್ ನಲ್ಲಿ  ಪ್ರಚಾರ ಮಾಡೋಕೆ ಶುರು ಮಾಡಿದ್ದಾರೆ. ಅಭ್ಯರ್ಥಿಗಳ ಫೋಟೋಗಳನ್ನು ನಟರು ತಮ್ಮ ಕೈಯಲ್ಲಿ ಹಿಡಿದಂತೆ ಎಡಿಟ್ ಮಾಡಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರೂ ಕೂಡ, ಚುನಾವಣಾಧಿಕಾರಿಗಳು ಮಾತ್ರ ಈವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ