ಯಡಿಯೂರಪ್ಪ, ಈಶ್ವರಪ್ಪ ವರ್ತನೆಯಿಂದ ಪಕ್ಷಕ್ಕೆ ಮುಜುಗುರ: ಸದಾನಂದಗೌಡ

ಸೋಮವಾರ, 16 ಜನವರಿ 2017 (14:12 IST)
ನಮ್ಮ ಪಕ್ಷದ ಇಬ್ಬರೂ ನಾಯಕರು ಬಹಿರಂಗವಾಗಿಯೇ ಕಿತ್ತಾಡುತ್ತಿದ್ದಾರೆ. ಇಂದರಿಂದ ಖಂಡಿತ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮುಜುಗುರ ಉಂಟಾಗಿರುತ್ತದೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಇದೇ ರೀತಿಯ ವರ್ತನೆಯನ್ನು ಮುಂದುವರೆಸಿದರೆ ಪಕ್ಷಕ್ಕೆ ನಷ್ಟವಾಗುವುದು ಖಚಿತ ಎಂದರು.
 
ರಾಜ್ಯ ಬಿಜೆಪಿಯಲ್ಲಿರುವ ಗೊಂದಲಗಳ ಕುರಿತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಐದು ರಾಜ್ಯಗಳ ಚುನಾವಣೆಯಲ್ಲಿ ರಾಷ್ಟ್ರೀಯ ನಾಯಕರು ಬ್ಯುಸಿಯಾಗಿದ್ದಾರೆ. ಚುನಾವಣೆ ಬಳಿಕ ಇತ್ತ ಗಮನ ಹರಿಸಲಿದ್ದಾರೆ ಎಂದು ತಿಳಿಸಿದರು.
 
ಜನವರಿ 19 ರಂದು ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಈ ವೇಳೆ 24 ಶಾಸಕರು ಬರೆದ ಪ್ರೇಮ ಪತ್ರದ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿ ಕೇಂದ್ರ ಸಚಿವ ಸದಾನಂದಗೌಡ ಅವರು ಮಾರ್ಮಿಕವಾಗಿ ನಗೆ ಬೀರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ