33 ದಲಿತ ಕುಟುಂಬಗಳನ್ನ ಮನೆಗೆ ಆಹ್ವಾನಿಸಿದ ಯಡಿಯೂರಪ್ಪ
ಬಿಜೆಪಿ ನಡಿಗೆ ದಲಿತರ ಮನೆಗೆ ಎಂಬ ಜನಸಂಪರ್ಕ ಅಭಿಯಾನ ನಡೆಸಿದ್ದ ಮಾಜಿ ಸಿಎಂ ಯಡಿಯೂರಪ್ಪ ದಲಿತ ಕುಟುಂಬಗಳಿಗೆ ತಮ್ಮ ಮನೆಗೆ ಆಹ್ವಾನ ನೀಡಿದ್ದಾರೆ.
ಜನಸಂಪರ್ಕ ಸಭೆ ಸಂದರ್ಭ ಹೋಟೆಲ್`ನಿಂದ ತರಿಸಿದ ಆಹಾರವನ್ನ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸೇವಿಸಿ ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಮಧ್ಯೆ, ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಲು ಯಡಿಯೂರಪ್ಪ ಈ ಔತಣಕೂಟ ಆಯೋಜಿಸಿದ್ದಾರೆ ಎನ್ನಲಾಗಿದೆ.