ಹೌದು, ಸ್ವರ್ಣ ಬಣ್ಣದಿಂದ ಮುದ್ರಿಸಲಾಗಿರುವ ಆಹ್ವಾನ ಪತ್ರಿಕೆಯನ್ನು ಆಡಳಿತ ಮಂಡಳಿ ಇಂದು ಬಿಡುಗಡೆಗೊಳಿಸಿದ್ದು, ಪತ್ರಿಕೆಯಲ್ಲಿ 'ಸಾಮ್ರಾಜ್ಯ ಪಟ್ಟಾಭಿಷೇಕ ಮಹೋತ್ಸವ ಲಗ್ನಪತ್ರಿಕೆ' ಎಂಬ ತಲೆ ಬರಹವನ್ನು ಮುದ್ರಿಸಲಾಗಿದೆ. ಅಲ್ಲದೆ ನೂತನ ರಾಜನಾಗಿ ಸಿಂಹಾಸನ ಏರುತ್ತಿರುವ ರಾಜ ಯದುವೀರ್ ಕೃಷ್ಣರಾಜ ಒಡೆಯರ್ ಅವರಿಗೆ ಸಾರ್ವಜನಿಕರು ಭಾಗವಹಿಸಿ ಶುಭ ಹಾರೈಸುವಂತೆ ಮನವಿ ಮಾಡಿಕೊಳ್ಳಲಾಗಿದೆ.