ಭಾರತ ಹಿಂದೂ ರಾಷ್ಟ್ರವಾಗಲು ಬಿಡಲ್ಲ, ಆದರೆ ಪಾಕಿಸ್ತಾನದಂತಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಗುರುವಾರ, 4 ಜನವರಿ 2024 (11:33 IST)
Photo Courtesy: Twitter
ಮೈಸೂರು: ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಲ್ಲ. ಒಂದು ವೇಳೆ ಹಿಂದೂ ರಾಷ್ಟ್ರವಾದರೆ ನಮ್ಮ ದೇಶ ಪಾಕಿಸ್ತಾನ, ಅಫ್ಘಾನಿಸ್ತಾದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಅವರು ಈ ರೀತಿ ಹೇಳಿದ್ದಾರೆ. ಇದೀಗ ಬಿಜೆಪಿ ಮತ್ತು ಬೆಂಬಲಿಗರ ಟೀಕೆಗೆ ಗುರಿಯಾಗಿದೆ.  ಈ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ಇದೇ ಹೇಳಿಕೆ ನೀಡಿದ್ದರು. ಇದೀಗ ಪುತ್ರನ ಸರದಿ.

‘ಅಂಬೇಡ್ಕರ್ ಕೂಡಾ ಭಾರತ ಹಿಂದೂ ರಾಷ್ಟ್ರವಾಗಲು ಬಿಡಬಾರದು ಎಂದಿದ್ದರು. ನಾವು ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಲ್ಲ. ಹಾಗೊಂದು ವೇಳೆ ಇದು ಹಿಂದೂ ರಾಷ್ಟ್ರವಾದರೆ ಈ ದೇಶ ಪಾಕಿಸ್ತಾನ, ಅಫ್ಘಾನಿಸ್ತಾನದಂತಾಗುತ್ತದೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಭಾರತವನ್ನು ಹಿಂದೂ ರಾಷ್ಟ್ರವಾಗಿ ಮಾಡಲು ಪ್ರಯತ್ನಿಸುತ್ತಿದೆ’ ಎಂದಿದ್ದರು.

ಯತೀಂದ್ರ ಹೇಳಿಕೆ ಪೇಜಾವರ ಶ್ರೀಗಳು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ‘ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೇನೋ. ಅಂತಹ ಸಿದ್ಧತೆ ಇಲ್ಲಿ ನಡೆಯುತ್ತಿದೆ ಎಂಬುದರ ಮುನ್ಸೂಚನೆ ಕೊಡುತ್ತಿದ್ದಾರೆ. ಅವರ ಹೇಳಿಕೆ ಸರಿಯಲ್ಲ. ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರವಾಗಿದ್ದು ಜಾತಿ, ಪಂಗಡ ಎಂದು ಮೀಸಲಿರದೆ ಎಲ್ಲರನ್ನು ಅಪ್ಪಿಕೊಂಡ ದೇಶ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ