ಯಶಸ್ವಿನಿ' ಯೋಜನೆ ಮರು ಜಾರಿ ಮಾಡಲು ಸಿಎಂ ನಿರ್ಧಾರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಜನಸಾಮಾನ್ಯರ ಬೇಡಿಕೆಯಂತೆ, 2 ನೇ ಹಂತದ ಚಿಕಿತ್ಸೆಗಾಗಿ ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡಲು ನಿರ್ಧರಿಸಲಾಗಿದ್ದು, ಬಜೆಟ್ ನಲ್ಲಿ ಈ ಉದ್ದೇಶಕ್ಕೆ ಅನುದಾನ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.