ಬಿಎಸ್‌ವೈ-ಈಶ್ವರಪ್ಪ... ನಾನೊಂದು ತೀರ ನೀನೊಂದು ತೀರ

ಶನಿವಾರ, 6 ಮೇ 2017 (12:21 IST)
ರಾಜ್ಯ ಕಾರ್ಯಕಾರಿಣಿ ಸಭೆಯ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರೂ ಒಬ್ಬರ ಮುಖವನ್ನು ಮತ್ತೊಬ್ಬರು ನೋಡಲಿಲ್ಲ ಎನ್ನಲಾಗಿದೆ.
 
ಇಬ್ಬರು ನಾಯಕರ ನಡುವಿನ ಮುನಿಸು ಮುಂದುವರೆದಿದ್ದು, ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೈ ಮುಗಿದ್ರೂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ.   
ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಮುರಳಿಧರ್ ರಾವ್ ಅವರಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸುವ ಸಂದರ್ಭದಲ್ಲಿ ಎಲ್ಲಾ ನಾಯಕರು ಎದ್ದು ನಿಂತಿದ್ದರೂ ಈಶ್ವರಪ್ಪ ಕುಳಿತಿರುವುದು ಕೂಡಾ ಗಮನಕ್ಕೆ ಬಂದಿತು.
 
 ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಕಟ್ಟಪ್ಪಣೆ ಹೊರಡಿಸಿದ್ದರೂ ಇಬ್ಬರ ನಾಯಕರ ನಡುವಿನ ಮುನಿಸು ಮಾತ್ರ ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ