ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲಿ ಟೀಕಾ ಪ್ರಹಾರ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಎಲ್ಲ ರಾಜ್ಯಗಳಲ್ಲೂ ಬಿಜೆಪಿಯ ಸಾಧನೆ ಶ್ಯೂನ್ಯ. ಯಡಿಯೂರಪ್ಪನವರಗಿಂತ ಹತ್ತು ಪಟ್ಟು ನಾನು ಮಾತನಾಡಬಲ್ಲೆ ಆದರೆ ನನಗೆ ಸಂಸ್ಕೃತಿ ಇದೆ. ಅವರಂತಹ ಕೀಳು ಮಟ್ಟದಲ್ಲಿ ರಾಜಕೀಯ ಮಾಡಲು ನಮಗೆ ಬರುವುದಿಲ್ಲ ಎಂದು ಯಡಿಯೂರಪ್ಪ ವಿರುದ್ಧ ಲೇವಡಿ ಮಾಡಿದ್ದಾರೆ.