ಬೇರೆ ಪಕ್ಷಗಳಿಂದ ಬರುವವರಿಗೆ ಟಿಕೆಟ್ ಭರವಸೆ ನೀಡಲ್ಲ- ಯಡಿಯೂರಪ್ಪ

ಮಂಗಳವಾರ, 19 ಡಿಸೆಂಬರ್ 2017 (11:24 IST)
ಬಿಜೆಪಿ ಪಕ್ಷಕ್ಕೆ ಬೇರೆ ಪಕ್ಷಗಳಿಂದ ಬರುವವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ತತ್ವ-ಸಿದ್ಧಾಂತ, ನಾಯಕತ್ವ ಒಪ್ಪಿಕೊಂಡು ಪಕ್ಷದಲ್ಲಿ ಯಾವುದೇ ಸ್ಥಾನಮಾನ ನಿರೀಕ್ಷೆ ಇಟ್ಟುಕೊಳ್ಳದೆ ಬರುವವರಿಗೆ ಮುಕ್ತ ಸ್ವಾಗತ ನೀಡಲಾಗುವುದು ಎಂದಿದ್ದಾರೆ.

ಯಾರೇ ಪಕ್ಷಕ್ಕೆ ಬಂದರೂ ಟಿಕೆಟ್ ನೀಡುವ ಭರವಸೆ ನೀಡುವುದಿಲ್ಲ.  ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೊಂದು ಕ್ಷೇತ್ರಕ್ಕೆ 5 ರಿಂದ 10 ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ  ಮಿಷನ್-150 ತಲುಪಲು ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ