ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಆತ್ಮಾವಲೋಕನ ಸಭೆ

ಮಂಗಳವಾರ, 18 ಏಪ್ರಿಲ್ 2017 (17:58 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಸೋಲಿ ಕುರಿತಂತೆ ಪರಾಮರ್ಷೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ 23 ರಂದು ಪಕ್ಷದ ಆತ್ಮಾವಲೋಕನ ಸಭೆ ಕರೆದಿದ್ದಾರೆ.
 
ಸಭೆಯಲ್ಲಿ ಉಪಚುನಾವಣೆ ಸೋಲಿಗೆ ಕಾರಣಗಳು ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ,
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಆತ್ಮಾವಲೋಕನ ಸಭೆ ಕರೆಯಲಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
 
ಯಡಿಯೂರಪ್ಪ ಎಲ್ಲಾ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿಲ್ಲ ಎನ್ನುವ ಅಪಸ್ವರ ಯಡಿಯೂರಪ್ಪ ವಿರೋಧಿ ಬಣದಲ್ಲಿ ಹರಿದಾಡುತ್ತಿದೆ ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ