ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಜೆಡಿಎಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಊಹಾಪೋಹ. ಈಶ್ವರಪ್ಪ ಅವರನ್ನು ನಮ್ಮ ಪಕ್ಷದ ಯಾವುದೇ ಶಾಸಕರು ಭೇಟಿಯಾಗಿಲ್ಲ. ಆದರೆ, ಯಾಕೆ ಇಂತಹ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೋ ಗೊತ್ತಿಲ್ಲ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲುತ್ತೇನೆ ಎಂದು ಹೇಳುವ ಬಿ.ಎಸ್.ಯಡಿಯೂರಪ್ಪ, 2005 ರಲ್ಲಿ ಜೆಡಿಎಸ್ ಪಕ್ಷ ಸೇರಲು ಮುಂದಾಗಿದ್ದರು. ಈ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಮಚಂದ್ರೇಗೌಡ ಬಂದು ಚರ್ಚೆ ನಡೆಸಿದ್ದರು. ಇಂತವರು ಈಶ್ವರಪ್ಪ ಅವರನ್ನು ಪಕ್ಷ ದ್ರೋಹಿ ಎನ್ನುತ್ತಿದ್ದಾರೆ. ಕೆಜೆಪಿ ಕಟ್ಟಿ ಬಿಎಸ್ವೈ ಮಾಡಿದ್ದೇನು? ಎಂದು ಖಾರವಾಗಿ ಪ್ರಶ್ನಿಸಿದರು.