ಯಡಿಯೂರಪ್ಪ ಏಳಿಗೆ ಸಹಿಸದವರಿಂದ ಭಿನ್ನಮತ: ಎಂ.ಪಿ.ರೇಣುಕಾಚಾರ್ಯ

ಬುಧವಾರ, 29 ಜೂನ್ 2016 (16:11 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಏಳಿಗೆಯನ್ನು ಸಹಿಸದವರು ಭಿನ್ನಮತ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
 
ನಿನ್ನೆ ಹೋಟೆಲ್‌ನಲ್ಲಿ ನಡೆದ ಅತೃಪ್ತ ನಾಯಕರ ಸಭೆಯಲ್ಲಿ ಪ್ರಮುಖ ನಾಯಕರು ಉಪಸ್ಥಿತರಿರಲ್ಲಿಲ್ಲ. ಕೇವಲ ಯಡಿಯೂರಪ್ಪರನ್ನು ಸಹಿಸಿದ ಕೆಲ ನಾಯಕರು ಪದಾಧಿಕಾರಿಗಳ ನೇಮಕವನ್ನು ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
 
ಯಡಿಯೂರಪ್ಪ ತುಂಬಾ ಅನುಭವಿ ನಾಯಕರು. ಅರ್ಹತೆಯಿರುವ ಕಾರ್ಯಕರ್ತರಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿ, ಕೆಜೆಪಿ ಎನ್ನುವುದೆಲ್ಲಾ ಕಪೋಲ ಕಲ್ಪಿತ. ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಿರುವುದು ರಾಜಕೀಯ ವಿರೋಧಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿಯ ಅತೃಪ್ತ ಮುಖಂಡರೊಂದಿಗೆ ಯಡಿಯೂರಪ್ಪ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಶೀಘ್ರದಲ್ಲಿಯೇ ಭಿನ್ನಮತ ಶಮನವಾಗಲಿದ್ದು ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ರಚಿಸುವುದು ಖಚಿತ ಎಂದು ಭವಿಷ್ಯ ನುಡಿದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ