ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅನುಮತಿ ನಿರಾಕರಣೆ

ಸೋಮವಾರ, 19 ಫೆಬ್ರವರಿ 2018 (10:36 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅವಕಾಶ ನಿರಾಕರಣೆ ಮಾಡಲಾಗಿದೆ.

ಯಡಿಯೂರಪ್ಪ ಹಾಗೂ ನಿತೀನ್ ಗಡ್ಕರಿ ಅವರು ಶಿವಮೊಗ್ಗದಿಂದ ಮೈಸೂರಿಗೆ ಮಧ್ಯಾಹ್ನ ಹೆಲಿಕಾಪ್ಟರ್‌ನಲ್ಲಿ ಬರಲು ಮುಂದಾಗಿದ್ದಾರೆ. ಆದರೆ, ಎಸ್‌ಪಿಜಿ ಸಿಬ್ಬಂದಿ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅವಕಾಶ ನೀಡಿಲ್ಲ.
 
ಮೈಸೂರಿನಿಂದ 30 ಕಿ.ಮೀ ದೂರದ ಸುತ್ತೂರಿನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಗ್ ಮಾಡಿ ಅಲ್ಲಿಂದ ಬಿಜೆಪಿ ನಾಯಕರು ಮೈಸೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ