ಯಾತ್ರೆಯ ನಂತ್ರ ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಲಿದ್ದಾರೆ: ಜಾರಕಿಹೊಳಿ

ಭಾನುವಾರ, 3 ಡಿಸೆಂಬರ್ 2017 (15:20 IST)
ಬಿಜೆಪಿ ಪರಿವರ್ತನಾ ಯಾತ್ರೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿಹೋಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆ ಫ್ಲಾಪ್ ಶೋದಿಂದಾಗಿ ಯಡಿಯೂರಪ್ಪ ತುಂಬಾ ಚಿಂತಿತರಾಗಿದ್ದಾರೆ. ನಿನ್ನೆ ಇಂಡಿ ಪಟ್ಟಣದಲ್ಲಿ ನಡೆದ ಘಟನೆ ಅವರಿಗೆ ಅಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ. ಇಲ್ಲವಾದಲ್ಲಿ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಸವಾಲ್ ಹಾಕಿದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಸಿಎಂ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ