ಬಿಎಸ್‌ವೈ ಹೇಳಿಕೆ ಕಾಮಿಡಿ ಶೋ ಆಗ್ತಿದೆ: ದಿನೇಶ್ ಗುಂಡೂರಾವ್

ಶುಕ್ರವಾರ, 10 ಮಾರ್ಚ್ 2017 (14:25 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗಳು ಕಾಮಿಡಿ ಶೋ ರೀತಿ ಆಗ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಬಿಬಿಎಂಪಿಯಲ್ಲಿ ಮೂರು ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ. ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇಂದಿನವರೆಗೂ ದಾಖಲೆಗಳನ್ನು ಬಿಡುಗಡೆ ಮಾಡದೆ ಮೌನವಾಗಿದ್ದಾರೆ ಎಂದು ಲೇವಡಿ ಮಾಡಿದರು.
 
ಯಡಿಯೂರಪ್ಪ ಹೇಳಿಕೆಗಳಿಗೆ ಮಹತ್ವ ಇಲ್ಲದಂತಾಗಿದೆ. ಅವರು ಅಂತಹ ಸ್ಥಿತಿಗೆ ತಲುಪಬಾರದು ಎಂದು ವ್ಯಂಗ್ಯವಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕವಾಗಿ, ಜನಪರವಾಗಿರುವುದನ್ನು ಸಹಿಸಿದ ಯಡಿಯೂರಪ್ಪ, ಸರಕಾರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ