ಸುಪ್ರೀಂಕೋರ್ಟ್ ನ್ಯಾಯಪೀಠ ಬದಲಾವಣೆಗೆ ಬಿಎಸ್‌ವೈ ಆಗ್ರಹ

ಬುಧವಾರ, 28 ಸೆಪ್ಟಂಬರ್ 2016 (19:41 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ ಬದಲಾವಣೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನ್ಯಾಯ ಪೀಠವನ್ನು ಬದಲಾವಣೆ ಮಾಡದೇ ಹೋದರೆ ರಾಜ್ಯಕ್ಕೆ ಎಂದಿಗೂ ನ್ಯಾಯ ಸಿಗುವುದಿಲ್ಲ. ಹೀಗಾಗಿ ನ್ಯಾಯಪೀಠವನ್ನು ಬದಲಾವಣೆ ಮಾಡಬೇಕು ಎಂದು ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಣಯಕ್ಕೆ ಸ್ವಾಗತ ಕೋರಿದ ಬಿ.ಎಸ್.ಯಡಿಯೂರಪ್ಪ, ಕಾವೇರಿ ನ್ಯಾಯಪೀಠವನ್ನು ಬದಲಾವಣೆ ಮಾಡುವಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುತ್ತಿರುವ ಆದೇಶದಿಂದ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದ್ದರೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ