ಯಡಿಯೂರಪ್ಪ ಮನೆಯಿಂದ ಹೊರಬರುವಂತಿಲ್ಲ!

ಮಂಗಳವಾರ, 5 ಸೆಪ್ಟಂಬರ್ 2017 (10:37 IST)
ಬೆಂಗಳೂರು: ಹಿಂದೂ ಸಂಘಟನೆಗಳ ಹತ್ಯೆ ಖಂಡಿಸಿ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಹೊರಟಿರುವ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ತಡೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕ ಯಡಿಯೂರಪ್ಪ ಮನೆಯಿಂದ ಹೊರಬರದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

 
ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಮನೆಯ ಮುಂದೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಯಡಿಯೂರಪ್ಪ ಮನೆಯಿಂದ ಹೊರಬಂದರೆ ಬಿಜೆಪಿ ಕಾರ್ಯಕರ್ತರ ಹೋರಾಟ ತೀವ್ರಗೊಳ್ಳುತ್ತದೆ ಎಂಬ ಕಾರಣಕ್ಕೆ ಅವರಿಗೆ ಒಂದು ರೀತಿಯಲ್ಲಿ ದಿಗ್ಭಂಧನ ವಿಧಿಸಲಾಗಿದೆ.

ಇನ್ನೊಂದೆಡೆ ರ್ಯಾಲಿ ನಡೆಸಲು ಅಡ್ಡಿಪಡಿಸುತ್ತಿರುವ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ.. ಇನ್ನೊಬ್ಬ ಸ್ಯಾಂಡಲ್ ವುಡ್ ನಟಿ ರಹಸ್ಯ ಮದುವೆ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ