ಪೂಜೆ ಸಲ್ಲಿಸಿ ಕೊಠಡಿಯಲ್ಲಿ ಕುಳಿತ ಯಡಿಯೂರಪ್ಪ

ಸೋಮವಾರ, 2 ಜುಲೈ 2018 (12:07 IST)
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕೃತ ಪ್ರವೇಶ ಮಾಡಿದ್ದಾರೆ.

ಇಂದು ಬೆಳಿಗ್ಗೆ ತಮ್ಮ ಕೊಠಡಿಯಲ್ಲಿರುವ ದೇವರ ಫೋಟೋಗಳಿಗೆ ಪೂಜೆ ಸಲ್ಲಿಸಿ ಬಳಿಕ ಯಡಿಯೂರಪ್ಪ ತಮ್ಮ ಕುರ್ಚಿಯಲ್ಲಿ ಆಸೀನರಾಗಿದ್ದಾರೆ.

ಇಂದಿನಿಂದ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ಯಡಿಯೂರಪ್ಪ ತಮ್ಮ ಪಕ್ಷದ ಶಾಸಕಾಂಗ ಪಕ್ಷ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿಗೊಳಿಸಿದ್ದು, ಈ ಸಭೆಯಲ್ಲಿ ಸದನದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆಸಬೇಕಿರುವ ಹೋರಾಟದ ರೂಪು ರೇಷೆಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ