'ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ' -ಯಡಿಯೂರಪ್ಪ

ಭಾನುವಾರ, 11 ಫೆಬ್ರವರಿ 2018 (11:30 IST)
ಬೆಂಗಳೂರು: ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಹೂಡಿರುವುದಕ್ಕೆ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯನ್ನು ಖಂಡಿಸಿದ ಯಡಿಯೂರಪ್ಪ ರಾಜ್ಯದ ಸ್ಲಂಗಳಲ್ಲಿ ವಾಸ್ತವ್ಯ ಮಾಡುತ್ತಿರುವುದು ಪ್ರಚಾರಕ್ಕಲ್ಲ, ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.


ಸ್ಲಂಗಳ ಸ್ಥಿತಿಗತಿ ಸಮೀಕ್ಷಾ ವರದಿ ಬಿಡುಗಡೆ ಬಳಿಕೆ ಯಡಿಯೂರಪ್ಪ ಈ ಮಾತನ್ನು ಹೇಳಿದ್ದಾರೆ. ಇನ್ನು ದಿನೇಶ್ ಗುಂಡೂರಾವ್ ಸ್ಲಂ ವಾಸ್ತವ್ಯ ಮಾಡದೇ ನಮ್ಮ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸ್ಲಂಗಳ ಸಮಸ್ಯೆ ಅರಿಯುವುದು ಬಿಟ್ಟು ಟೀಕೆ ಮಾಡುತ್ತಾರೆ. ಪ್ರಧಾನಿ ಮೋದಿ ಟೀಕಿಸುವಷ್ಟು ಕೆಳ ಮಟ್ಟಕ್ಕಿಳಿಯುತ್ತಾರೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ