ಗೋಮಾಂಸ ತಿಂದಿದ್ದೇನೆ.. ಕೇಳೋಕೆ ನೀವ್ಯಾರು ಎಂದ ಸಚಿವ ಕಾಗೋಡು ತಿಮ್ಮಪ್ಪ

ಶನಿವಾರ, 23 ಸೆಪ್ಟಂಬರ್ 2017 (17:52 IST)
ಶಿವಮೊಗ್ಗ: ನಾನು ದನದ ಮಾಂಸ ತಿಂದಿದ್ದೇನೆ. ಅದನ್ನು ಕೇಳಲು ನೀವ್ಯಾರು ಎಂದು ಗೋರಕ್ಷಕರಿಗೆ ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನೆ ಮಾಡಿದ್ದಾರೆ.

ಸಾಗರ ತಾಲೂಕಿನ ಆನಂದಪುರದಲ್ಲಿ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ನಡಿಗೆ ಮರಳಿ ಜನರ ಕಡೆಗೆ ಎಂಬ ಕಾರ್ಯಕ್ರಮವನ್ನ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಈ ರೀತಿಯ ಹೇಳಿಕೆ ನೀಡಿದ್ದಾರೆ.

ನಾನು ದನದ ಮಾಂಸ ತಿಂದಿದ್ದೇನೆ. ಅದರ ರುಚಿ ಹಂದಿ ಮಾಂಸ, ಕುರಿ ಮಾಂಸದ ತರಹವೇ ಇದೆ. ಇದರಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಆದರೆ ಬಿಜೆಪಿ ಪಕ್ಷದವರು ಹಸುವಿನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಗೋ ರಕ್ಷಕರ ಹೆಸರಿನಲ್ಲಿ ಗಲಭೆ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ