ಹೌದು, ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಎಎಪಿಯಲ್ಲಿ ಪ್ರಸ್ತುತ ಸದಸ್ಯರ ನಡುವೆ ಭಿನ್ನಮತ ಸ್ಫೋಟಗೊಂಡಿದೆ ಎನ್ನಲಾಗುತ್ತಿದ್ದು, ಎಎಪಿ ಪಕ್ಷದ ಎಲ್ಲಾ ಚಟುವಟಿಕೆಗಳೂ ಕೂಡ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಕೇಂದ್ರೀಕೃತವಾಗಿರುತ್ತವೆ. ಅಲ್ಲದೆ ಅವರೇ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು, ಏಕಮುಖ ಪಕ್ಷವಾಗಿದೆ. ಇಲ್ಲಿ ಇತರರಿಗೆ ಅವಕಾಶವಿಲ್ಲ ಎಂಬ ಸುದ್ದಿಯೊಂದಿಗೆ ಪಕ್ಷದ ವಿರುದ್ಧ ಸಮರ ಸಾರುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪಕ್ಷದ ಸದಸ್ಯರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಮೂಲಕ ರಾಜಕೀಯ ಮುಕ್ತಿ ನೀಡಲು ಎಎಪಿ ನಿರ್ಧರಿಸಿದೆ ಎನ್ನಲಾಗುತ್ತಿದೆ.