ಕಾಡಾನೆ ದಾಳಿಗೆ ಯುವಕ ಬಲಿ

ಮಂಗಳವಾರ, 1 ನವೆಂಬರ್ 2022 (16:05 IST)
ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ನಾಡಿಗೆ ಲಗ್ಗೆ ನೀಡುವುದು ಹೊಸದೇನಲ್ಲ, ಹಾಸನ ಜಿಲ್ಲೆಯಲ್ಲಿ ದಿನೇದಿನೇ ಕಾಡಾನೆ ಉಪಟಳ ಹೆಚ್ಚಾಗುತ್ತಿದ್ದು, ಕಾಡಾನೆ ದಾಳಿಗೆ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಘಟನೆ ನಡೆದಿದ್ದು, 34 ವರ್ಷದ ಮನು ಎಂಬ ಯುವಕ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಆಕ್ರೋಶ ಹೊರಹಾಕಿದ ಸ್ಥಳಿಯರು ಹಾಗೂ ಸಂಬಂಧಿಕರು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬರುವವರೆಗೂ ಮೃತ ದೇಹ ಎತ್ತಲು ಬಿಡೋದಿಲ್ಲ ಎಂದು ಪಟ್ಟು ಹಿಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ