ಬೆಂಗಳೂರು ಮಹಾಮಳೆಗೆ ಯುವತಿ ಬಲಿ..!

ಮಂಗಳವಾರ, 6 ಸೆಪ್ಟಂಬರ್ 2022 (20:06 IST)
ಬೆಸ್ಕಾಂ,ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ  ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾಳೆ. ಇನ್ನು ಈ ಘಟನೆವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ಇರುವ ಸಿದ್ದಾಪುರ ರಸ್ತೆಯಲ್ಲಿ  ಅಖಿಲ  (23) ವರ್ಷದ ಅಮಾಯಕ ಯುವತಿ ಯಾರದ್ದೋ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದಾಳೆ 
 
ನಿನ್ನೆ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದೆ .ಅಖಿಲ ಕಳೆದುಕೊಂಡಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.  ರಸ್ತೆಯಲ್ಲಿ ಮಂಡಿಯುದ್ದಕ್ಕೆ ನಿಂತ ನೀರು  ಅಖಿಲ ಸಾವಿಗೆ ಕಾರಣವಾಯ್ತು.ಜೊತೆಗೆ ಬೆಸ್ಕಾಂ ನ ನಿರ್ಲಕ್ಷ್ಯವು ಯುವತಿ ಸಾವಿಗೆ ಕಾರಣವಾಯ್ತು.ಬಿಕಾಂ ಪದವೀಧರೆಯಾಗಿದ್ದ ಅಖಿಲ ಖಾಸಗಿ ಖಾಲೆಯೊಂದರ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡ್ತಿದರು.ಕಳೆದ ಎರಡು ವರ್ಷದಿಂದ ಕೆಲಸ ಮಾಡಿಕೊಂಡಿದ್ದ ಅಖಿಲ ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಿದರು. ನಿನ್ನೆ ರಾತ್ರಿ 8 ಗಂಟೆಗೆ ಶಾಲೆಯಲ್ಲಿ ಕೆಲಸ ಮುಗಿಸಿ ಹೊರಟಿದಳು.ರಾತ್ರಿ 9.30 ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಆ್ಯಕ್ಟಿವಾ ಬೈಕ್ ನಲ್ಲಿ ಅಖಿಲ ಬರುತ್ತಿದ್ದರು ಆಗ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ನಿಂತಿತ್ತು .ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದಾಳೆ .ನೀರು ಹೆಚ್ಚಾಗಿದ್ದರಿಂದ ಸ್ಕೂಟರ್ ಆಫ್ ಆಗಿ ಬೀಳುವ ಹಂತಕ್ಕೆ ತಲುಪಿದಳು.ಈ ವೇಳೆ ಸಹಾಯಕ್ಕೆ ಬಲ ಭಾಗದಲ್ಲೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾಳೆ .ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ