ಕಾರಣವಿಲ್ಲದೇ ತಮಟೆ ಬಾರಿಸಿದ್ದಕ್ಕೆ ಬಿತ್ತು ಗೂಸಾ

ಸೋಮವಾರ, 13 ಡಿಸೆಂಬರ್ 2021 (11:05 IST)
ಬೆಂಗಳೂರು: ಕಾರಣವಿಲ್ಲದೇ ತಮಟೆ ಬಾರಿಸಿದ್ದಕ್ಕೆ ಯುವಕನಿಗೆ ಥಳಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿನಾಕಾರಣ ತಮಟೆ ಬಾರಿಸಿದ್ದಕ್ಕೆ ಗ್ರಾಮಪಂಚಾಯಿತಿ ಸದಸ್ಯನ ನೇತೃತ್ವದಲ್ಲಿ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿದೆ. ಇದರಿಂದಾಗಿ ಯುವಕನಿಗೆ ಗಾಯಗಳಾಗಿವೆ.

ಈ ಸಂಬಂಧ ಯುವಕ ಪೊಲೀಸರಿಗೆ ದೂರು ನೀಡಿದ್ದು, ಆರು ಮಂದಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ