ಪ್ರೀತಿಗೆ ವಿರೋಧಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ

ಶನಿವಾರ, 13 ಸೆಪ್ಟಂಬರ್ 2014 (10:40 IST)
ಜಿಲ್ಲೆ ಭಾಲ್ಕಿ ತಾಲೂಕಿನ ಸಿಕಂದರವಾಡಿ ಗ್ರಾಮದಲ್ಲಿ  20 ವರ್ಷ ವಯಸ್ಸಿನ ಕಿರಣ್ ತುಳಸಿರಾಂ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಪೋಷಕರು ತೀವ್ರ ವಿರೋಧಿಸಿದ್ದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಮುನ್ನ ಯುವಕ ಡೆತ್ ನೋಟ್ ಕೂಡ ಬರೆದಿಟ್ಟಿದ್ದು, ತನ್ನ ಸಾವಿಗೆ ಕಾರಣರಾದವರ 8 ಜನರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾನೆ.

ಸುಮಾರು 2-3 ವರ್ಷಗಳಿಂದ ತಾನು ಯುವತಿಯನ್ನು ಪ್ರೀತಿ ಮಾಡುತ್ತಿದ್ದುದಾಗಿಯೂ, ಯುವತಿಯ ಮನೆಯವರು ಸೇರಿದಂತೆ ತನ್ನ ಪೋಷಕರು  ಪ್ರೀತಿಗೆ  ವಿರೋಧ ವ್ಯಕ್ತಪಡಿಸಿದ್ದಾರೆಂದು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದು, ತನ್ನ ಪ್ರೀತಿಗೆ ಅಡ್ಡಿಯಾದ 8 ಜನರ ಹೆಸರನ್ನು ಉಲ್ಲೇಖಿಸಿದ್ದಾನೆ.

ಪೊಲೀಸರು ಈ 8 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.  ಯುವಕ ಗ್ರಾಮದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಟಕಚಿಂಚೊಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 
 

ವೆಬ್ದುನಿಯಾವನ್ನು ಓದಿ