ಬಿಎಸ್ ಯಡಿಯೂರಪ್ಪ ಪುತ್ರನ ಕಾರು ಡಿಕ್ಕಿ ಹೊಡೆದು ಯುವಕ ಸಾವು

ಶುಕ್ರವಾರ, 1 ಸೆಪ್ಟಂಬರ್ 2017 (10:07 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಶಾಸಕ ಬಿ ವೈ ರಾಘವೇಂದ್ರ ಚಲಿಸುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.

 
ಹೊನ್ನಾಳಿ ತಾಲೂಕು ಮಾದೂರು ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಯಡಿಯೂರಪ್ಪ ಪುತ್ರ ರಾಘವೇಂದ್ರ ಶಿವಮೊಗ್ಗದಿಂದ ಶಿಖಾರಿಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದಾಗಿ ಬೈಕ್ ಸವಾರ ಸುರೇಶ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನ ರಾಘವೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ನ್ಯಾಮತಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ.. ಕೇಂದ್ರ ಸಚಿವ ಸ್ಥಾನಕ್ಕೆ ಉಮಾಭಾರತಿ ರಾಜೀನಾಮೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ