ಕುಡಿದ ಮತ್ತಿನಲ್ಲಿ ಜಗಳವಾಡಿ ನೆರೆಮನೆಯವನ ಕೊಲೆ

ಸೋಮವಾರ, 6 ಜೂನ್ 2022 (10:30 IST)
ಬೆಂಗಳೂರು: ಕುಡಿದ ಮತ್ತಿನಲ್ಲಿ ನೆರೆಹೊರೆಯ ಎರಡು ಮನೆಯವರ ನಡುವೆ ಜಗಳವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

24 ವರ್ಷದ ಯುವಕ ಪ್ರಶಾಂತ್ ಕೊಲೆಗೀಡಾದಾತ. ಈತನನ್ನು ನೆರೆಮನೆಯ 26 ವರ್ಷದ ಅರ್ಜುನ್ ಕೊಲೆ ಮಾಡಿದ್ದಾನೆ. ಬಳಿಕ ತಲೆಮರೆಸಿಕೊಂಡಿದ್ದಾನೆ.

ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಇಬ್ಬರೂ ಕ್ಷುಲ್ಲುಕ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಈ ವೇಳೆ ಅರ್ಜುನ್ ಪ್ರಶಾಂತ್ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಕ್ಷಣವೇ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ