ಜಮೀರಣ್ಣ ಆಂಡ್ ಟೀಂಗೆ ರಾಹುಲ್ ಗಾಂಧಿ ಅಭಯ!

ಗುರುವಾರ, 17 ಆಗಸ್ಟ್ 2017 (10:47 IST)
ಬೆಂಗಳೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡ ತ್ರಿಶಂಕು ಸ್ಥಿತಿಯಲ್ಲಿದ್ದ ಏಳು ಮಂದಿ ಶಾಸಕರಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಯ ನೀಡಿದ್ದಾರೆ.

 
ಜಮೀರ್ ಅಹಮ್ಮದ್, ಚೆಲುವಯರಾಯಸ್ವಾಮಿ, ಬಾಲಕೃಷ್ಣ ಸೇರಿದಂತೆ ಏಳು ಮಂದಿ ಬಂಡಾಯ ಶಾಸಕರು ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದ್ದು, ರಾಹುಲ್ ಗಾಂಧಿ ಟಿಕೆಟ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ಖುಷಿಯಲ್ಲಿ ಬಂಡಾಯ ಅಭ್ಯರ್ಥಿಗಳು ಭರ್ಜರಿಯಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬೃಹತ್ ಸಮಾವೇಶ ನಡೆಸಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮುಂತಾದ ಘಟಾನುಘಟಿ ನಾಯಕರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರಲು ಇವರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಕಿರಿಕ್ ಹುಡುಗಿಗೆ ಒಲಿದ ಅದೃಷ್ಟ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ